- ಭವಿಷ್ಯದಲ್ಲಿ ಸಂಭವಿಸುವ ಸಂಗತಿಯ ಕುರಿತು ಭವಿಷ್ಯ ನುಡಿದದ್ದು ಮತ್ತು ಅದು ಹಾಗೆಯೇ ಸಂಭವಿಸಿದ್ದು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರವಾದಿತ್ವದ ಚಿಹ್ನೆಗಳಲ್ಲಿ ಒಂದಾಗಿದೆ.
- ದುಷ್ಕರ್ಮಗಳಿಗೆ ಸಂತೃಪ್ತಿ ಸೂಚಿಸಬಾರದು ಮತ್ತು ಅದರಲ್ಲಿ ಸಹಭಾಗಿಯಾಗಬಾರದು. ಬದಲಿಗೆ, ಅವುಗಳನ್ನು ವಿರೋಧಿಸುವುದು ಕಡ್ಡಾಯವಾಗಿದೆ.
- ಆಡಳಿತಗಾರರು ಶರಿಯತ್ (ಧರ್ಮಶಾಸ್ತ್ರ) ಗೆ ವಿರುದ್ಧವಾದ ಸಂಗತಿಯನ್ನು ಮಾಡುವಾಗ ಅದರಲ್ಲಿ ಅವರನ್ನು ಅನುಸರಿಸಬಾರದು.
- ಮುಸ್ಲಿಮ್ ಆಡಳಿತಗಾರರ ವಿರುದ್ಧ ದಂಗೆಯೇಳಬಾರದು. ಏಕೆಂದರೆ, ಅದು ಅನೇಕ ರೀತಿಯ ಹಾನಿ, ರಕ್ತಪಾತ ಮತ್ತು ಅಶಾಂತಿಗೆ ಕಾರಣವಾಗುತ್ತದೆ. ದುಷ್ಟ ಆಡಳಿತಗಾರರ ದುಷ್ಕರ್ಮಗಳನ್ನು ಸಹಿಸಿಕೊಳ್ಳುವುದು ಮತ್ತು ಅವರು ನೀಡುವ ತೊಂದರೆಗಳಿಗೆ ತಾಳ್ಮೆಯಿಂದ ಪ್ರತಿಕ್ರಿಯಿಸುವುದು ದಂಗೆಯಿಂದ ಉಂಟಾಗುವ ದುಷ್ಪರಿಣಾಮಗಳಷ್ಟು ಹಾನಿಕಾರಕವಾಗಿರುವುದಿಲ್ಲ.
- ನಮಾಝ್ಗೆ ಬಹಳ ಪ್ರಾಮುಖ್ಯತೆಯಿದೆ. ಏಕೆಂದರೆ, ಅದು ಸತ್ಯನಿಷೇಧ ಮತ್ತು ಇಸ್ಲಾಮನ್ನು ಬೇರ್ಪಡಿಸುತ್ತದೆ.