ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ವಿದ್ವಾಂಸರ ನಡುವೆ...
ವಿದ್ವಾಂಸರ ನಡುವೆ ನಾನು ಕೂಡ ನಿಮ್ಮಂತೆ ಒಬ್ಬ ವಿದ್ವಾಂಸ ಎಂದು ತೋರಿಸುವುದಕ್ಕಾಗಿ ಮತ್ತು ಜಂಬಪಡುವುದಕ್ಕಾಗಿ, ಅಥವಾ ಅವಿವೇಕಿಗಳೊಡನೆ ಮತ್ತು ಅಜ್ಞಾನಿಗಳೊಡನೆ ಸಂಭಾಷಣೆ ಮಾಡಿ ತರ್ಕಿಸ...
ಉಸ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್ ಅನ್ನು ಕಲಿಯುವವರು ಮತ್ತು ಅದನ್...
ಪವಿತ್ರ ಕುರ್‌ಆನ್ ಅನ್ನು ಪಠಿಸುವವರು, ಕಂಠಪಾಠ ಮಾಡುವವರು, ಸುಶ್ರಾವ್ಯವಾಗಿ ಪಾರಾಯಣ ಮಾಡುವವರು, ಅದರಿಂದ ಜ್ಞಾನವನ್ನು ಪಡೆಯುವವರು, ಅದರ ವ್ಯಾಖ್ಯಾನವನ್ನು ಕಲಿಯುವವರು ಅದರ ಪ್ರಕಾರ...
ಅಬೂ ಅಬ್ದುರ್‍ರಹ್ಮಾನ್ ಸುಲಮಿ (ಅಲ್ಲಾಹು ಅವರಿಗೆ ಕರುಣೆ ತೋರಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರ ಸಂಗಡಿಗರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಪೈಕಿ ನಮಗೆ ಕುರ್‌ಆನ್...
ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಗಡಿಗರು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ವಚನಗಳನ್ನು ಕಲಿಯುತ್ತಿದ್ದರು. ಆ...
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುವ ಪ್ರತಿಯೊಬ್ಬ ಮುಸಲ್ಮಾನನಿಗೂ ಒಂದು ಒಳಿ...
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಕುರ್‌ಆನ್ ಪಠಿಸುವವನು, ಅದರ ಪ್ರಕಾರ ಜೀವನ ನಡೆಸಿದವನು ಮತ್ತು ಸದಾ ಕುರ್‌ಆನ್ ಪಠಿಸುತ್ತ...

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ವಿದ್ವಾಂಸರ ನಡುವೆ ಮೆರೆಯಲು, ಅಥವಾ ಅವಿವೇಕಿಗಳೊಡನೆ ತರ್ಕಿಸಲು, ಅಥವಾ ಸಭೆಗಳಲ್ಲಿ ಶ್ರೇಷ್ಠ ಸ್ಥಾನಮಾನ ಪಡೆಯಲು ಜ್ಞಾನವನ್ನು ಕಲಿಯಬೇಡಿ. ಈ ಉದ್ದೇಶಗಳಿಗಾಗಿ ಕಲಿಯುವವನಿಗೆ ನರಕವೇ ಗತಿ, ನರಕವೇ ಗತಿ."

ಉಸ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್ ಅನ್ನು ಕಲಿಯುವವರು ಮತ್ತು ಅದನ್ನು ಕಲಿಸುವವರು ನಿಮ್ಮಲ್ಲಿ ಅತ್ಯುತ್ತಮರು."

ಅಬೂ ಅಬ್ದುರ್‍ರಹ್ಮಾನ್ ಸುಲಮಿ (ಅಲ್ಲಾಹು ಅವರಿಗೆ ಕರುಣೆ ತೋರಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರ ಸಂಗಡಿಗರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಪೈಕಿ ನಮಗೆ ಕುರ್‌ಆನ್ ಕಲಿಸಿಕೊಡುತ್ತಿದ್ದವರು ಹೇಳುತ್ತಿದ್ದರು: ಅವರು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ವಚನಗಳನ್ನು ಕಲಿಯುತ್ತಿದ್ದರು. ನಂತರ ಆ ಹತ್ತು ವಚನಗಳಲ್ಲಿರುವ ಜ್ಞಾನ ಮತ್ತು ಕರ್ಮವನ್ನು ಕಲಿತುಕೊಳ್ಳದೆ ಅವರು ಮುಂದಿನ ಹತ್ತು ವಚನಗಳಿಗೆ ಹೋಗುತ್ತಿರಲಿಲ್ಲ. ಅವರು ಹೇಳುತ್ತಿದ್ದರು: ನಾವು ಜ್ಞಾನ ಮತ್ತು ಕರ್ಮವನ್ನು ಒಟ್ಟೊಟ್ಟಿಗೆ ಕಲಿಯುತ್ತಿದ್ದೆವು."

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿತುಗಳ ಪ್ರತಿಫಲವನ್ನು ಒಳಗೊಂಡಿದೆ. ಅಲಿಫ್-ಲಾಮ್-ಮೀಮ್ ಒಂದೇ ಅಕ್ಷರವೆಂದು ನಾನು ಹೇಳುವುದಿಲ್ಲ. ಆದರೆ, ಅಲಿಫ್ ಒಂದು ಅಕ್ಷರವಾಗಿದೆ, ಲಾಮ್ ಒಂದು ಅಕ್ಷರವಾಗಿದೆ ಮತ್ತು ಮೀಮ್ ಒಂದು ಅಕ್ಷರವಾಗಿದೆ."

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನಿನ ವ್ಯಕ್ತಿಯೊಡನೆ ಹೇಳಲಾಗುವುದು: ಪಠಿಸು ಮತ್ತು ಏರುತ್ತಾ ಹೋಗು. ಇಹಲೋಕದಲ್ಲಿ ಸಾವಧಾನದಿಂದ ಪಠಿಸುತ್ತಿದ್ದಂತೆ ಪಠಿಸು. ನೀನು ಪಠಿಸುವ ಕೊನೆಯ ವಚನದ ಬಳಿ ನಿನ್ನ ಪದವಿಯಿದೆ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನು ತನ್ನ ಮನೆಗೆ ಹಿಂದಿರುಗಿ ಬರುವಾಗ ಅಲ್ಲಿ ಮೂರು ದೊಡ್ಡ ಕೊಬ್ಬಿದ ಗರ್ಭಿಣಿ ಹೆಣ್ಣು ಒಂಟೆಗಳನ್ನು ಕಾಣಲು ಇಷ್ಟಪಡುತ್ತಾನೆಯೇ?" ನಾವು ಹೇಳಿದೆವು: "ಹೌದು." ಅವರು ಹೇಳಿದರು: "ನಿಮ್ಮಲ್ಲೊಬ್ಬನು ನಮಾಝ್ ಮಾಡುವಾಗ ಪಠಿಸುವ ಮೂರು ವಚನಗಳು ಮೂರು ದೊಡ್ಡ ಕೊಬ್ಬಿದ ಗರ್ಭಿಣಿ ಹೆಣ್ಣು ಒಂಟೆಗಳಿಗಿಂತಲೂ ಉತ್ತಮವಾಗಿವೆ."

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಈ ಕುರ್‌ಆನಿನ ಬಗ್ಗೆ ನಿಗಾ ವಹಿಸಿರಿ. ಏಕೆಂದರೆ ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಒಂಟೆಗಳು ಅವುಗಳನ್ನು ಕಟ್ಟಿಹಾಕಲಾದ ಹಗ್ಗಗಳಿಂದ ತಪ್ಪಿಸಿಕೊಳ್ಳುವುದಕ್ಕಿಂತಲೂ ವೇಗವಾಗಿ ಕುರ್‌ಆನ್ ನೆನಪಿನಿಂದ ಮಾಸಿ ಹೋಗುತ್ತದೆ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಮನೆಗಳನ್ನು ಸಮಾಧಿಗಳನ್ನಾಗಿ ಮಾಡಬೇಡಿ. ನಿಶ್ಚಯವಾಗಿಯೂ ಸೂರ ‌ಬಕರ ಪಠಿಸಲಾಗುವ ಮನೆಯಿಂದ ಶೈತಾನನು ಓಡಿ ಹೋಗುತ್ತಾನೆ."

ಉಬೈ ಬಿನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್ (ಆಯತುಲ್ ಕುರ್ಸಿ) [ಬಕರ: 255]". ಆಗ ಅವರು ನನ್ನ ಎದೆಗೆ ತಟ್ಟುತ್ತಾ ಹೇಳಿದರು: "ಅಲ್ಲಾಹನಾಣೆ! ಓ ಅಬೂ ಮುಂದಿರ್, ಜ್ಞಾನವು ನಿಮಗೆ ಸಂತೋಷವನ್ನು ದಯಪಾಲಿಸಲಿ."

ಅಬೂ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸುತ್ತಾರೋ, ಅವರಿಗೆ ಅವೆರಡು ಸಾಕು."

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಪ್ರಾರ್ಥನೆಯೇ ಆರಾಧನೆ." ನಂತರ ಅವರು ಪಠಿಸಿದರು: “ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದನು: ನೀವು ನನ್ನನ್ನು ಕರೆದು ಪ್ರಾರ್ಥಿಸಿರಿ, ನಾನು ನಿಮಗೆ ಉತ್ತರ ನೀಡುತ್ತೇನೆ. ನನ್ನನ್ನು ಆರಾಧಿಸಲು ಯಾರು ಅಹಂಕಾರ ತೋರುತ್ತಾರೋ ಅವರು ನಿಂದನೀಯ ಸ್ಥಿತಿಯಲ್ಲಿ ನರಕವನ್ನು ಪ್ರವೇಶಿಸುವರು.”

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಸ್ಥಿತಿಗಳಲ್ಲೂ ಅಲ್ಲಾಹನನ್ನು ಸ್ಮರಿಸುತ್ತಿದ್ದರು."